ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ.!?

0
2922

 

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ, ಶಿವಮೊಗ್ಗದಲ್ಲಿ ಯುವಕ ಸಾವು

ಗೋಪಿ ವೃತ್ತದ ಬಳಿ ಆರ್ ಸಿ ಬಿ ಅಭಿಮಾನಿಗಳನ್ನ ನಿಯಂತ್ರಿಸಲು ಹರ ಸಾಹಸ ಪಟ್ಟ ಪೊಲೀಸರು, ಉಷ ನರ್ಸಿಂಗ್ ಹೋಮ್ ಬಳಿ ರಸ್ತೆ ಅಘಾತದಲ್ಲಿ ಯುವಕ ಸಾವು-

ಶಿವಮೊಗ್ಗ: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭ ಅಪಘಾತವಾಗಿ (Accident) ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ವೆಂಕಟೇಶ ನಗರದ ನಿವಾಸಿ ಅಭಿ (21) ಮೃತ ದುರ್ದೈವಿ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್‌ ಜಾಥಾ ನಡೆಸಿದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.

 

ಅಪಘಾತವಾಗುತ್ತಿದ್ದಂತೆ ಯುವಕರು ಕೂಡಲೆ ನೆರವಿಗೆ ಧಾವಿಸಿದ್ದಾರೆ. ಆದರೆ ಈ ವೇಳೆಗಾಗಲೆ ಅಭಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ : ಆರ್ ಸಿ ಬಿ ಗೆದ್ದ ಬೆನ್ನಲ್ಲೇ ಗೋಪಿ ವೃತ್ತದಲ್ಲಿ ಸಂಭ್ರಮ ಮನೆ ಮಾಡಿತ್ತು.

ಸಂಭ್ರಮ ಮಿತಿ ಮೀರಿದ ಹಿನ್ನಲೆ ಪೋಲೀಸರು ನೆರದಿದ್ದ ಗುಂಪು ಚದುರಿಸಲು ಲಾಠಿ ಪ್ರಹಾರ ಮಾಡಿ ಚದುರಿಸಿದ್ದಾರೆ.