ಶಿವಮೊಗ್ಗ ನಗರದ ತುಂಗಾ ನದಿಯ ಹಳೆಯ ಸೇತುವೆ ಹಾಳಾಗಿರುವ ಹಿನ್ನೆಲೆಯಲ್ಲಿ, ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣದ ಅಗತ್ಯವಿದ್ದು, ಈ ಯೋಜನೆಗಾಗಿ ರೂ. 33 ಕೋಟಿ ಅನುದಾನದ ಅವಶ್ಯಕತೆ ಇರುವುದರಿಂದ, ಲೋಕೋಪಯೋಗಿ ಇಲಾಖೆ (PWD) ಯಿಂದ ಪ್ಲಾನ್ ಮತ್ತು ಅಂದಾಜು ಪಟ್ಟಿಯೊಂದಿಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಲೋಕೋಪಯೋಗಿ ಇಲಾಖೆಯ ಮಾನ್ಯ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಇತ್ತಿಚೆಗೆ ಬೆಂಗಳೂರಿನಲ್ಲಿ ಭೇಟಿಯಾಗಿ, ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.