ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಚಿಕ್ಕನಾಯಕನಹಳ್ಳಿ: ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದ ತಹಶೀಲ್ದಾರ್

On: March 21, 2024 1:07 PM
Follow Us:
---Advertisement---

ಚಿಕ್ಕನಾಯಕನಹಳ್ಳಿ: ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು ₹30 ಸಾವಿರ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಗೀತಾ ಬುಧವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

 

ತಾಲ್ಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಅವರಿಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು ₹3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬುಧವಾರ ಬೆಳಗ್ಗೆ ₹20 ಸಾವಿರ ಹಣ ಪಡೆದಿದ್ದರು. ರಾತ್ರಿ 7.30 ರ ಸಮಯದಲ್ಲಿ ₹30 ಸಾವಿರ ಹಣ ತೆಗೆದುಕೊಳ್ಳುವಾಗ ತಮ್ಮ ಮನೆಯಲ್ಲಿಯೇ ಸಿಕ್ಕಿಬಿದ್ದಿದ್ದಾರೆ.

 

ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ನೇತೃತ್ವದ ತಂಡ ಕಾರ್ಯಚರಣೆ ನಡೆಸಿತ್ತು. ಗೀತಾ ಅವರನ್ನು ವಶಕ್ಕೆ ಪಡೆದಿದ್ದಾರೆ.

Sathish munchemane

Join WhatsApp

Join Now

 

Read More