ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಏಪ್ರಿಲ್ 27ಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ ಸಿಂಗಂ ಅಣ್ಣಾಮಲೈ: ಕೆ.ಎಸ್. ಈಶ್ವರಪ್ಪ

On: April 24, 2023 5:39 PM
Follow Us:
---Advertisement---

ಶಿವಮೊಗ್ಗ: ಏಪ್ರಿಲ್ 27ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ಕಡೆ ವಿವಿಧ ಸಮಾಜಗಳ ಸಭೆ ಸಮಾರಂಭಗಳನ್ನುಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದರು.
ಬೆಳಿಗ್ಗೆ 9 ಗಂಟೆಗೆ ಭದ್ರಾವತಿಯಲ್ಲಿ ವಿವಿಧ ಸಮಾಜದ ಪ್ರಮುಖರ ಸಭೆ ನಡೆಯಲಿದೆ. 11 ಗಂಟೆಗೆ ಶಿವಮೊಗ್ಗದ ಎನ್‍ಇಎಸ್ ಮೈದಾನದಲ್ಲಿ ವಿವಿಧ ಸಮಾಜಗಳ ಸಮಾವೇಶ ನಡೆಯಲಿದೆ. ಸಂಜೆ 5 ಗಂಟೆಗೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಪ್ರಬುದ್ಧರ ಮತ್ತು ಯುವಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಏ.30ರಂದು ರಾಜ್ಯಾದ್ಯಂತ ಮನೆಮನೆ ಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ನಗರದ ಪ್ರತಿ ಮನೆಗೂ ಮಹಾ ಸಂಪರ್ಕ ಅಭಿಯಾನದ ಮೂಲಕ ಕಾರ್ಯಕರ್ತರು ಮತದಾರರನ್ನು ಸಂಪರ್ಕಿಸಲಿದ್ದಾರೆ. ಶಿವಮೊಗ್ಗದ 35 ವಾರ್ಡ್ 283 ಬೂತ್‍ಗಳಲ್ಲಿ 8,496 ಪೇಜ್ ಪ್ರಮುಖರು ಪ್ರತಿ ಮನೆಗೆ ಹೋಗಿ ಬಿಜೆಪಿ ಪರವಾಗಿ ಮತ ಕೇಳಲಿದ್ದು, ಜಿಲ್ಲಾದ್ಯಂತ ಈ ಆಭಿಯಾನ ನಡೆಯಲಿದೆ ಎಂದರು.

ಈ ಬಾರಿ ಹಿಂದುತ್ವದ ಕಟ್ಟಾಳು ಎಸ್.ಎನ್. ಚನ್ನಬಸಪ್ಪನವರಿಗೆ ಟಿಕೆಟ್ ಲಭಿಸಿದ್ದು, ಎಲ್ಲಾ ಯವ ಕಾರ್ಯತರ್ಕರಲ್ಲಿ ಸಂತೋಷ ತಂದಿದೆ. ಕಳೆದ ಬಾರಿ 46ಸಾವಿರ ಲೀಡ್‍ನಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ 60ಸಾವಿರ ಲೀಡ್‍ನಲ್ಲಿ ಗೆಲ್ಲುವುದು ನಿಶ್ಚಿತ ಎಂದರು.
ಒಬ್ಬ ಪ್ರಾಮಾಣಿಕ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದ ಸಿಂಗಂ ಎಂದು ಹೆಸರು ಪಡೆದ ಅಣ್ಣಾಮಲೈ ಪ್ರಚಾರ ಶಿವಮೊಗ್ಗ ಕ್ಷೇತ್ರಕ್ಕೆ ಅನುಕೂಲವಾಗಲಿದೆ. ಕಾಂಗ್ರೆಸ್ ಜೆಡಿಎಸ್‍ನವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಬಿಜೆಪಿ ತಳಮಟ್ಟದಿಂದ ಸದೃಢವಾಗಿ ಬೆಳೆದಿದ್ದು ಒಂದು ಸ್ಥಾನದಿಂದ 105 ಸ್ಥಾನದ ವರೆಗೆ ಗ್ರಾಫ್ ಏರುತ್ತಾ ಹೋಗಿದೆ. ಇಳಿಯುವ ಪ್ರಶ್ನೆಯೇ ಇಲ್ಲ ಎಂದರು.
ಜಗದೀಶ್ ಶೆಟ್ಟರ್ ಸಿಟ್ಟಿನ ಭರದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅವರ ದೇಹದಲ್ಲಿ ಹರಿಯುತ್ತಿರುವುದು ಹಿಂದುತ್ವದ ರಕ್ತ ಅವರು ಮಂಡಿಸಿದ ಕಾನೂನುಗಳನ್ನು ಕಾಂಗ್ರೆಸ್ ಹಿಂಪಡೆಯುತ್ತದೆ ಎಂದು ಹೇಳಿದೆ. ಹಾಗಾಗಿ ಚುನಾವಣೆ ನಂತರ ಅವರು ಮತ್ತೆ ಬಿಜೆಪಿಗೆ ಹಿಂದಿರುಗಲಿದ್ದಾರೆ ಎಂದರು. ಬಿಜೆಪಿಯ ಮತ ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ. ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಕೆ. ಚಂದ್ರಶೇಖರ್ ಹಾಗೂ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ತನ್ನ ಸಂಗಡಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಗದೀಶ್, ಶಿವಾಜಿ, ಚಂದ್ರಶೇಖರ್, ನಾಗರಾಜ್, ಲಕ್ಷ್ಮಣ್, ಅಣ್ಣಪ್ಪ ಮತ್ತಿತರರಿದ್ದರು.

Sathish munchemane

Join WhatsApp

Join Now

 

Read More